ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಬ್ಯಾಂಕ್ ನಲ್ಲಿನ ಹಣ, ಚಿನ್ನಾಭರಣ ದರೋಡೆ ಮಾಡಿದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಡೆದಿದೆ. ವಾಮಾಚಾರ ಮಾಡಿ ಬ್ಯಾಂಕ್ ದರೋಡೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಬ್ಯಾಂಕಿನ ಬಾಗಿಲು, ಕಿಟಕಿ ಒಡೆದು ಹಣ ಹಾಗೂ ಚಿನ್ನಾಭರಣ ದೋಚಿಕೊಂಡು ಹೋಗಲಾಗಿದೆ. ನಗದು ಹಾಗೂ ಎಷ್ಟು ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಅನ್ನೋದರ ನಿಖರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಬ್ಯಾಂಕ್ ಗೆ ಕಸ ಗುಡಿಸಲು ಕ್ಲೀನರ್ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬ್ಯಾಂಕ್ ನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ಹಾರ್ಡ್ ಡಿಸ್ಕ್ ಸಮೇತ ತೆಗೆದುಕೊಂಡು ಹೋಗಿದ್ದಾರೆ. ಬ್ಯಾಂಕಿನಲ್ಲಿ ಗೊಂಬೆ, ನಿಂಬೆ ಹಣ್ಣು ಇಟ್ಟು ಹೋಗಲಾಗಿದೆಯಂತೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.