Ad imageAd image

ಪ್ರವಾಸಿ ತಾಣವಾಗಿ ವಿಜಯಪುರ ಅಭಿವೃದ್ಧಿ: ಸಚಿವ ಎಂ.ಬಿ ಪಾಟೀಲ

ನಗರದ ತಾಜ್‌ಬಾವಡಿಯ ಪುನರುಜ್ಜೀವನಗೊಳಿಸುವುದು ಮತ್ತು ಸಂರಕ್ಷಿಸುವುದಷ್ಟೇ ಅಲ್ಲದೇ, ನಗರದಲ್ಲಿರುವ ಐತಿಹಾಸಿಕ ಗೋಲಗುಂಬಜ್, ಇಬ್ರಾಹಿಂರೋಜಾ ಮತ್ತು ಇತರೆ ಸ್ಮಾರಕಗಳನ್ನು

Nagesh Talawar
ಪ್ರವಾಸಿ ತಾಣವಾಗಿ ವಿಜಯಪುರ ಅಭಿವೃದ್ಧಿ: ಸಚಿವ ಎಂ.ಬಿ ಪಾಟೀಲ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ನಗರದ ತಾಜ್‌ಬಾವಡಿಯ ಪುನರುಜ್ಜೀವನಗೊಳಿಸುವುದು ಮತ್ತು ಸಂರಕ್ಷಿಸುವುದಷ್ಟೇ ಅಲ್ಲದೇ, ನಗರದಲ್ಲಿರುವ ಐತಿಹಾಸಿಕ ಗೋಲಗುಂಬಜ್(golgumbaz), ಇಬ್ರಾಹಿಂರೋಜಾ(ibrahim roza) ಮತ್ತು ಇತರೆ ಸ್ಮಾರಕಗಳನ್ನು ಸೇರಿಸಿ ಪ್ರತ್ಯೇಕವಾಗಿ ಬಿಜಾಪುರ ಸ್ಮಾರಕಗಳ ಸಮೂಹ ಮಾಡಿ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಎಂ.ಬಿ.ಪಾಟೀಲ ಹೇಳಿದರು.

ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಪ್ರವಾಸೋದ್ಯಮ ಇಲಾಖೆ ಹಾಗೂ ವರ್ಡ್ ಹೇರಿಟೇಜ್ ಮಾನ್ಯುಮೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ (WMF) ವಿಶ್ವ ಸ್ಮಾರಕಗಳ ನಿಧಿ ಸಹಭಾಗಿತ್ವದಲ್ಲಿ ಮತ್ತು ಟಿಸಿಎಸ್ ಫೌಂಡೇಶನ್‌ರವರ ಸಿಎಸ್‌ಆರ್ ಅನುದಾನದಡಿ ಸ್ಮಾರಕ ದತ್ತು ಯೋಜನೆಯಡಿಯಲ್ಲಿ ವಿಜಯಪುರ ನಗರದ ಐತಿಹಾಸಿಕ ತಾಜಬಾವಡಿ(taj bawadi) ಸ್ಮಾರಕ ಸಂರಕ್ಷಣೆ ಹಾಗೂ ಅಭಿವೃದ್ಧಿಪಡಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

1620ರಲ್ಲಿ 224 ಚದರ ಅಡಿ ವಿಸ್ತೀರ್ಣದ, 35 ಚದರ ಅಡಿ ಹೊರ ಪ್ರದೇಶ ಮತ್ತು ಸುಮಾರು 52 ಅಡಿ ಎತ್ತರದಲ್ಲಿರುವ ನಿರ್ಮಿಸಿರುವ ಐತಿಹಾಸಿಕ(Historical) ತಾಜ್‌ಬಾವಡಿಯನ್ನು ಸಂರಕ್ಷಣೆ ಮಾಡಿ, ಅಭಿವೃದ್ದಿಗೊಳಿಸಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸ್ಮಾರಕದ(Memorial) ಆವರಣದಲ್ಲಿರುವ ಖಾಲಿ ಜಾಗದಲ್ಲಿ ಸಾಂಸ್ಕೃತಿಕ ಕಲ್ಯಾಣಿ-ಪುಸ್ಕರಣಿಯನ್ನು ನಿರ್ಮಿಸಲಾಗುವುದು. ಹಾಳಾಗಿರುವ ರಸ್ತೆ ಕಾಮಗಾರಿ ಕೈಗೊಳ್ಳಲಾಗುವುದು. ಹಮಾಮ್ ಪ್ರದೇಶ ಮತ್ತು ಸೆರಾಯ್‌ನ ಪೂರ್ವ ದಿಕ್ಕಿನಲ್ಲಿರುವ ಹಾಳಾಗಿರುವ ವಾಸ್ತುಶಿಲ್ಪದ ಅವಶೇಷಗಳನ್ನು ಪುನ:ಸ್ಥಾಪನೆಗಳಿಸಲಾಗುವುದು.

ಈಗಾಗಲೇ ಈ ಹಿಂದೆಯೂ ನಗರ ಸಂಚಾರ ಸಂದರ್ಭದಲ್ಲಿ ತಾಜ್‌ಬಾವಡಿ ಪುನರುಜ್ಜೀವನ ಸಂಕಲ್ಪ ತೊಟ್ಟು ಪುನರುಜ್ಜೀವನಗೊಳಿಸಲಾಗಿದೆ. ಹತ್ತಾರು ಬೃಹತ್ ಜೆಸಿಬಿ ಹಿಟಾಚಿ ಮಾದರಿಯ ಯಂತ್ರಗಳನ್ನು ಬಳಸಿ, ಬೃಹತ್ ಮೋಟಾರುಗಳನ್ನು ನೀರಿನ ಆಳಕ್ಕೆ ಇಳಿಸಿ ನೀರನ್ನು ಹೊರಹಾಕಿ ಸ್ವಚ್ಛತಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ನಗರದಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಭಿವೃದ್ದಿಗೊಳಿಸಲಾಗುವುದು. ತಾಜ್‌ಬಾವಡಿಯನ್ನು ಅಭಿವೃದ್ದಿಪಡಿಸಿ ಪ್ರವಾಸಿ ತಾಣವನ್ನಾಗಿ ಮಾರ್ಪಡಿಸಿ ಹೆಚ್ಚೆಚ್ಚು ಪ್ರವಾಸಿಗರನ್ನು ವಿಜಯಪುರಕ್ಕೆ ಆಕರ್ಷಿಸಲಾಗುವುದು ಎಂದರು.

ಈ ವೇಳೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ(Yatnal), ಮಹಾನಗರ ಪಾಲಿಕೆ ಮಹಾಪೌರರಾದ ಮಹೇಜಬಿನ್ ಹೊರ್ತಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article