Ad imageAd image

ವಿಜಯಪುರ: ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ

Nagesh Talawar
ವಿಜಯಪುರ: ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ವಿಜಯಪುರದಿಂದ ಮುಳಸಾವಳಗಿಗೆ ಹೊರಡುವ ವಿಜಯಪುರ ಘಟಕ-1ರ ಬಸ್ ಸಂಖ್ಯೆ ಕೆಎ28 ಎಫ್-1703ರಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋದ ಲ್ಯಾಪ್‌ಟಾಪ್‌ನ್ನು(Laptop) ಚಾಲಕ(Driver) ಶೇಖರ ಬೋಗಂ ಹಾಗೂ ನಿರ್ವಾಹಕ ಗುಂಡೂರಾವ ರಾಠೋಡ ಅವರು ಪ್ರಯಾಣಿಕರಿಗೆ ಮರಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ವಿಜಯಪುರದಿಂದ ಮುಳಸಾವಳಗಿಗೆ ಪ್ರಯಾಣಿಸುತ್ತಿದ್ದ ನೂರಲಿಶಾ ಮಕಾಂದಾರ ಅವರು ಮುಳಸಾವಳಗಿಗೆ ಇಳಿಯುವ ಸಂದರ್ಭದಲ್ಲಿ ತಮ್ಮ 50 ಸಾವಿರ ರೂಪಾಯಿ ಬೆಲೆಬಾಳುವ ಲ್ಯಾಪ್ ಟಾಪ್ ಬಸ್ಸಿನಲ್ಲಿಯೇ(Bus) ಮರೆತು ಬಿಟ್ಟು ಹೋಗಿದ್ದರು. ಬಸ್ಸಿನ ಚಾಲಕ ಹಾಗೂ ನಿರ್ವಾಹಕರು ಲ್ಯಾಪ್ ಟಾಪ್‌ನ್ನು ಮೂಲ ಮಾಲೀಕರಿಗೆ ಒಪ್ಪಿಸುವ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ. ಇವರ ಕಾರ್ಯಕ್ಕೆ ನೂರಲಿಶಾ ಮಕಾಂದಾರ ಅವರು ಬಹುಮಾನ ನೀಡಲು ಮುಂದೆ ಹೋದಾಗ ನಯವಾಗಿ ತಿರಸ್ಕರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಇವರ ಕಾರ್ಯಕ್ಕೆ ವಿವಿಧ ಸಾರ್ವಜನಿಕರು ಕೊಂಡಾಡಿದ್ದಾರೆ.

WhatsApp Group Join Now
Telegram Group Join Now
Share This Article