Ad imageAd image

ವಿಜಯಪುರ: ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ

ಜಿಲ್ಲಾ ತಳವಾರ ಸಮಾಜದ ಪ್ರತಿಭಾ ಪುರಸ್ಕಾರ ಸಮಿತಿ ವತಿಯಿಂದ ಜುಲೈ 27ರಂದು ನಗರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Nagesh Talawar
ವಿಜಯಪುರ: ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲಾ ತಳವಾರ(Talawar) ಸಮಾಜದ  ಪ್ರತಿಭಾ ಪುರಸ್ಕಾರ ಸಮಿತಿ ಹಾಗೂ ಜ್ಞಾನಗಂಗಾ ವಿವಿಧೋದ್ದೇಶ ಸಹಕಾರಿ ವಿಜಯಪುರ ಇವರ ಸಹಯೋಗದಲ್ಲಿ ಜು.27ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ 6ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಸೇವಾ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ(M.B.Patil) ಅವರು ಉದ್ಘಾಟಿಸಲಿದಾರೆ. ಪ್ರತಿಭಾ ಪುರಸ್ಕಾರ ಸಮಿತಿ ಗೌರವ ಅಧ್ಯಕ್ಷರೂ ಆದ ಜ್ಞಾನಗಂಗಾ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಅಶೋಕ ಸಾಸನೂರ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ(BRP), ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ನಿವೃತ್ತ ಉಪನಿರ್ದೇಶಕ ಎಸ್.ವಾಯ್.ಹಳಿಂಗಳಿ, ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ರಾಜಶೇಖರ ಕೊಲ್ಹಾರ, ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಎಸ್.ಬಿ.ಕೋಲಕಾರ, ಜ್ಞಾನಗಂಗಾ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಮಹಾದೇವಪ್ಪ ಲಗಮಣ್ಣಾ ಸೊನ್ನ, ನಿವೃತ್ತ ಕೃಷಿ ಅಧಿಕಾರಿ ರಾಮಚಂದ್ರ ಕಾಸಣ್ಣ ಅಂಬಿಗೇರ, ಬಳಗಾನೂರ ಕುವೆಂಪು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಸವರಾಜ ನಾಯ್ಕೋಡಿ, ಖ್ಯಾತ ಉದ್ಯಮಿ ತುಕಾರಾ ರಾಮು ಕೋಳಿ, ನಿವೃತ್ತ ಗುರುಮಾತೆ ಶಾಂತಾಬಾಯಿ ಓತಿಹಾಳ, ಖ್ಯಾತ ಕೊಳಲು ವಾದಕ ಬಾಬುಜೀ ನಾಯ್ಕೋಡಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ಜಿ.ತೊನಶ್ಯಾಳ, ಕೃಷಿ ಕ್ಷೇತ್ರದಲ್ಲಿ ಕುಮಟಗಿಯ ಮಹಾಂತಪ್ಪ ಸಂಗಪ್ಪ ವಾಲಿಕಾರ ಹಾಗೂ ಶಿಕ್ಷಣ ಕ್ಷೇತ್ರದ ವಿಶೇಷ ಸಾಧಕರಾಗಿ ಗುರುಮಾತೆಯರಾದ ಲಲಿತಾಬಾಯಿ ಪರಸಪ್ಪ ಅಂಬಿಗೇರ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಲಾಗಿದೆ.

WhatsApp Group Join Now
Telegram Group Join Now
Share This Article