Ad imageAd image

ಧರ್ಮಸ್ಥಳ ಸಂಘದ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ?

ಧರ್ಮಸ್ಥಳ ಸಂಘದಲ್ಲಿ ಸಾಲ ಪಡೆದಿದ್ದ ಮಹಿಳೆಗೆ ಸಂಘದವರು ನೀಡಿದ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

Nagesh Talawar
ಧರ್ಮಸ್ಥಳ ಸಂಘದ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ?
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮಂಡ್ಯ(Manday): ಧರ್ಮಸ್ಥಳ ಸಂಘದಲ್ಲಿ ಸಾಲ(Loan) ಪಡೆದಿದ್ದ ಮಹಿಳೆಗೆ ಸಂಘದವರು ನೀಡಿದ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದ ಮಹಾಲಕ್ಷ್ಮಿ(38) ಆತ್ಮಹತ್ಯೆ(Suicide) ಮಾಡಿಕೊಂಡ ಮಹಿಳೆಯಾಗಿದ್ದಾರೆ. ಧರ್ಮಸ್ಥಳ ಸಂಘದಿಂದ 2 ಲಕ್ಷ ರೂಪಾಯಿ ಸಾಲ ಪಡೆದಿದ್ದು. ಪ್ರತಿ ಬುಧವಾರ 1,700 ರೂಪಾಯಿ ಕಂತು ಕಟ್ಟಬೇಕಿತ್ತು. ನಿನ್ನೆ ಕಂತು ಕೇಳಲು ಬಂದ ಸಿಬ್ಬಂದಿಗೆ ಸ್ವಲ್ಪ ಸಮಯ ಕೇಳಿದ್ದಾರೆ. ಇದಕ್ಕೆ ಅವರು ನಿಂದಿಸಿದ್ದಾರಂತೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಮನೆಯಲ್ಲಿ ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಧರ್ಮಸ್ಥಳ (dharmasthala)ಸಂಘದ ವಿರುದ್ಧ ಇತ್ತೀಚೆಗಷ್ಟೇ ಶಾಸಕ ನರೇಂದ್ರಸ್ವಾಮಿ ವಾಗ್ದಾಳಿ ನಡೆಸಿದ್ದರು. ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಾರೆ. ಇದರಿಂದ ಬಡವರನ್ನು ತುಳಿಯುವ ಕೆಲಸ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ನೋಡಿದರೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article